Posts

Showing posts with the label Democracy for Dummies

Democracy for Dummies-1

ಬಡಪಾಯಿಗಳಿಗೆ ಕೆಲವು ಡೆಮಾಕ್ರಸಿ ಪಾಠಗಳು By ಹೃಷಿಕೇಶ್ ಬಹದ್ದೂರ್ ದೇಸಾಯಿ ಕರುನಾಡಲ್ಲಿ ಉಂಟಾಗುತ್ತಿರುವ ತಳಮಳಗಳ ಅರಿವಾಗದೆ ಪಿಳಿಪಿಳಿ ಕಣ್ಣು ಬಿಡುತ್ತಿರುವ ಬಡಪಾಯಿಗಳಿಗಾಗಿ ಹೃಷಿಕೇಶ್ ಬಹದ್ದೂರ್ ದೇಸಾಯಿ ಹೇಳಿಕೊಡುವ ಕೆಲವು ಪ್ರಾಥಮಿಕ ಪಾಠಗಳು ಇಲ್ಲಿವೆ ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಖಟಾಖಟಿಯನ್ನು ಟಿವಿಯಲ್ಲಿ ನೋಡಿದವರಿಗೆ ಗೊಂದಲ ಆಗಿರಬಹುದು, ಏನೂ ತಿಳಿಯದೇ ಇರದಿರಬಹುದು ಅಥವಾ ಪೂರ್ವಯೋರೋಪಿನ ದೇಶದ ಕಾಮೆಡಿ ಚಿತ್ರ ನೋಡಿದ ಅನುಭವ ಆಗಿರಬಹುದು. ಅಂಥವರು ಟಿವಿ ಚಾನೆಲ್ ಅನ್ನು ಮ್ಯೂಟ್ ಆಗಿಟ್ಟಿರಬಹುದು. ಹಾಗೆಂದು ಅವರಿಗೇನೂ ಮನರಂಜನೆ ಕಮ್ಮಿ ಆಗಿರಲಿಕ್ಕಿಲ್ಲ. ಹಾಗಾದರೆ ನಿಜವಾಗಿಯೂ ನಡೆದದ್ದೇನು? ಎನ್ನುವ ವಿಷಯದ ಬಗ್ಗೆ ಬರೆಯೋಣ ಎನ್ನಿಸಿತು. ಹೇಗೂ ಇದು ಕಂಪ್ಯೂಟರ್ಸ್ ಫಾರ್ ಡಮ್ಮೀಸ್ ಸರಣಿಯಲ್ಲಿ ಡೆಮಾಕ್ರೆಸಿ ಫಾರ್ ದ ಇನ್ ಡಿಫರೆಂಟ್ ಎಂದು ಪುಸ್ತಕರೂಪದಲ್ಲಿ ಹೊರಬರಲಿದೆ. ಕೆಂಡಸಂಪಿಗೆ ಓದುಗರಿಗಾಗಿ ಇದೊಂದು ಪೈರೆಟೆಡ್ ಕಾಪಿ. ೧. ಐದೈದು ವರ್ಷಕ್ಕೆ ಬರಬೇಕಾದ ಆದರೆ ಹಗಲೆಲ್ಲ ಬರುವ ಕಾಮೆಡಿ ಬೀದಿ ನಾಟಕಗಳಿಗೆ ಚುನಾವಣೆಗಳು ಎಂದು ಹೆಸರು. ೨. ಇಂಥಾ ಚುನಾವಣೆಗಳಲ್ಲಿ ನಾವು ನಮ್ಮ ಪರವಾಗಿ ಶಾಸನ ಮಾಡುವ ಹಾಗೂ ವಿವಿಧ ಇಲಾಖೆಗಳು ವೆಚ್ಚ ಮಾಡುವ ಹಣದ ಲೆಕ್ಕ ತಪಾಸು ಮಾಡಲು ಕಳಿಸುವ ಜನರಿಗೆ ಶಾಸಕ ಅಥವಾ ಎಮ್ಮೆಲ್ಲೆ ಎಂದು ಹೆಸರು. ೩. ತಾಯಿ ಭುವನೇಶ್ವರಿಯ ಕೃಪೆಯಿಂದ ಆರಿಸಿ ಬಂದ ಇಂಥ ಪುಣ್ಯಾತ್ಮರು ರಾಜ್ಯದ...

Democracy for Dummies-2

ಬಡಪಾಯಿಗಳಿಗೆ ಡೆಮೋಕ್ರಸಿ: ಹೃಷಿಕೇಶ್ ಪಂಚಾಯಿತಿ ಪಾಠ ಬಡಪಾಯಿಗಳಿಗೆ ಡೆಮೋಕ್ರಸಿ: ಹೃಷಿಕೇಶ್ ಪಂಚಾಯಿತಿ ಪಾಠ By ಹೃಷಿಕೇಶ್ ಬಹದ್ದೂರ್ ದೇಸಾಯಿ ರಾಜ್ಯದ ೩೦ ಪಂಚಾಯಿತಿಗಳಲ್ಲಿ ಬಿಜೆಪಿ ೧೨ ಸ್ಥಾನ ಗೆದ್ದಿತು, ಕಾಂಗ್ರೆಸ್, ಜೆಡಿಎಸ್ ನಾಲ್ಕು ನಾಲ್ಕು ಗೆದ್ದವು, ಇನ್ನುಳಿದ ೧0 ಅತಂತ್ರ ಅಂತ ಕೆಲವರು ಮೊನ್ನೆ ಸುದ್ದಿ ಬರೆದಿದ್ದಾರೆ. ನಿನ್ನೆಯಿಂದ ಅನೇಕರು ಓದುತ್ತಲೇ ಇದ್ದಾರೆ. ಎಲ್ಲಾ ಕಡೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಬಂದು ಪಂಚಾಯಿತಿ ಸಭೆಗಳು ಆರಂಭವಾಗುವವರೆಗೆ ಇಂಥ ಸುದ್ದಿ ಓದಲೇಬೇಕಾದ ಅನಿವಾರ್ಯತೆ ಮತದಾರರೆಂಬ ನಿತ್ಯ ನಾರಕಿಗಳಿಗೆ ಇದೆ. ಹಂಗೆಲ್ಲಾ ಅಂದರೇನು? ಇದರ ಅರ್ಥ ಏನು? ಈ ಜನವರಿ ೪ ನಾಲ್ಕರ ಚುನಾವಣೆ ಫಲಿತಾಂಶದ ಹಕೀಕತ್ತಾದರೂ ಏನು? ಇದು ಬೇಕಿತ್ತೇ? ನಿಮ್ಮೊಡನಿದ್ದೂ ನಿಮ್ಮಂತಿರದ ಬಾಳು “ಇದರ ಸೀದಾ ಸಾದಾ ಅರ್ಥ ಏನೆಂದರೆ, ರಾಜ್ಯದ ಜಿಲ್ಲಾ ಪಂಚಾಯಿತಿಗಳ ಪೈಕಿ ೪೦ ಶೇಕಡಾ ಸಂಸ್ಥೆಗಳಲ್ಲಿ ಬಹುಮತ ಪಡೆದ ಬಿಜೆಪಿ ಹಾಗೂ ಅದರ ಕಮಾಂಡರ್ ಆದ ಯಡಿಯೂರಪ್ಪ ಅವರು ಗೆದ್ದಂತೆ” ಅಂತ ಮುಖ್ಯಮಂತ್ರಿಗಳ ರೇಸ್ ಕೋಸ್ ನಿವಾಸದ ಸುತ್ತಮುತ್ತ ತಿರುಗಾಡುತ್ತಿರುವ ಅವರ ಹಿಂಬಾಲಕರು ಹೇಳುತ್ತಿದ್ದಾರಂತೆ. ಹೇಳಿಕೊಂಡು ಮತ್ತೆ ತಿರುಗಾಡುತ್ತಿದ್ದಾರಂತೆ. ಅಡ್ಡ ವೈಸರ್ ಗಳು ಇನ್ನು ಕೆಲವರು “ಇದಕ್ಕೆ ಸಾಧನೆ ಅಂತಾರೆಯೇ? ಇದು ಕಂಪ್ಲೀಟ್ ಫೇಲ್ಯುರ್. ನಾನು ಮುಖ್ಯಮಂತ್ರಿಯಾಗಿದ್ದರೆ ತೋರಿಸುತ್ತಿದ್ದೆ. ನೂರಕ್ಕೆ ನೂರು ಕಡೆ ನಮ್ಮವರು ಬಂದು ವಿರೋಧ ಪ...